ನೆಲ್ಲಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಧ್ವಜಾರೋಹಣ ಮಾಡಿದ ಶಾಸಕ ದಿನಕರ ಶೆಟ್ಟಿ

ಕುಮಟಾ: ಪಟ್ಟಣದ ನೆಲ್ಲಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ದಿನಕರ ಶೆಟ್ಟಿ ನೆರವೇರಿಸಿದರು.

ನಂತರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿರುವುದರ ಹಿಂದೆ ಅನೇಕ ಮಹನೀಯರ ತ್ಯಾಗ ಬಲಿದಾನವಿದೆ. ಅದನ್ನು ನಾವೆಲ್ಲ ಸ್ಮರಿಸುವ ಮೂಲಕ ಅಂಥ ಮಹನೀಯರಿಗೆ ಗೌರವ ಸಲ್ಲಿಸಬೇಕು. ದೇಶದ ಉನ್ನತಿಗೆ ಯುವ ಪಿಳಿಗೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ಕಾಲೇಜ್ ಪ್ರಾಂಶುಪಾಲ ಸತೀಶ ನಾಯ್ಕ, ಪ್ರಾಥಮಿಕ ಶಾಲಾ ಮುಖ್ಯಾಧ್ಯಾಪಕಿ ಸುಮನ ನಾಯಕ, ಪ್ರೌಢ ಶಾಲಾ ಮುಖ್ಯಾಧ್ಯಾಪಕ ಎಸ್ ವಿ ಭಟ್, ಶಿಕ್ಷಕರು, ಕಾಲೇಜ್ ಉಪನ್ಯಾಸಕರು ಇದ್ದರು.