ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ: ನಗರದ ತುಂಬೆಲ್ಲಾ ಟ್ರಾಫಿಕ್ ಜಾಮ್.!

ಬೆಂಗಳೂರು: ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಹಿನ್ನಲೆ ಇಂದು ನಗರದ ತುಂಬೆಲ್ಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂ, ಕಸ್ತೂರಿ ಬಾ ರಸ್ತೆ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್, ರೇಸ್ ಕೋರ್ಸ್, ಕೆ.ಆರ್ ಸರ್ಕಲ್, ಮೈಸೂರು ಬ್ಯಾಂಕ್ ರಸ್ತೆ, ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಕಿ.ಮೀ ಗಟ್ಟಲೇ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.