
ಪ್ರಯಾಗ್ರಾಜ್, ಫೆಬ್ರವರಿ 26: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇಂದು ಶಿವರಾತ್ರಿಯಂದು ಅಂತಿಮ ಪುಣ್ಯಸ್ನಾನ ನಡೆಯುತ್ತಿದ್ದು, ಕುಂಭಮೇಳಕ್ಕೆ ತೆರೆ ಬೀಳಲಿದೆ. ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ.
ಕೊನೆಯ ವಿಶೇಷ ಸ್ನಾನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕಾರಣ, ಸಂಜೆ 6 ಗಂಟೆಯಿಂದ ಪ್ರಯಾಗ್ರಾಜ್ನಾದ್ಯಂತ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿತ್ತು. ನಸಂದಣಿಯ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಈ ನಿರ್ಬಂಧಗಳನ್ನು ವಿಧಿಸಿದೆ. ಆದಾಗ್ಯೂ, ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತಿದೆ.
ಭಾರದ್ವಾಜ್ ಘಾಟ್, ನಾಗವಾಸುಕಿ ಘಾಟ್, ಮೋರಿ ಘಾಟ್, ಕಾಳಿ ಘಾಟ್, ರಾಮ್ ಘಾಟ್ ಮತ್ತು ಹನುಮಾನ್ ಘಾಟ್ ಕಡೆಗೆ ಸಾಗಲು ನಿರ್ದೇಶಿಸಲಾಗಿದೆ. ಅರೈಲ್ ಪ್ರದೇಶದಿಂದ ಬರುವ ಭಕ್ತರು ಸ್ನಾನಕ್ಕೆ ಅರೈಲ್ ಘಾಟ್ ಬಳಸಬೇಕು. ಹಾಲು, ತರಕಾರಿ, ಔಷಧಿಗಳು, ಇಂಧನ ಮತ್ತು ತುರ್ತು ವಾಹನಗಳ ಸಾಗಣೆ ಸೇರಿದಂತೆ ಅಗತ್ಯ ಸೇವೆಗಳ ಮೇಲೆ ಯಾವುದೇ ನಿರ್ಬಂಧಗಳಿಲ್ಲ.
ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯಂತಹ ಸರ್ಕಾರಿ ಸಿಬ್ಬಂದಿಗೆ ಸಂಚಾರ ನಿರ್ಬಂಧ ಅನ್ವಯವಾಗುವುದಿಲ್ಲ.
ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಭಕ್ತರು ತಮ್ಮ ಹತ್ತಿರದ ಘಾಟ್ಗಳಲ್ಲಿ ಸ್ನಾನ ಮಾಡಿ ಸ್ಥಳೀಯ ಶಿವ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಜನರನ್ನು ನಿಯಂತ್ರಿಸಲು, ಜನಸಂದಣಿಯ ಸಾಂದ್ರತೆಯ ಆಧಾರದ ಮೇಲೆ ಪಾಂಟೂನ್ ಸೇತುವೆಗಳನ್ನು ನಿರ್ವಹಿಸಲಾಗುವುದು. ಈ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಗಿದ್ದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ.



