ಬಜರಂಗದಳ ಕಾರ್ಯಕರ್ತನ ಮೇಲೆ ನಾಲ್ವರು ಮುಸ್ಲಿಂ ಯುವಕರಿಂದ ಹಲ್ಲೆ

ಶಿವಮೊಗ್ಗ: ನಿನ್ನೆಯಷ್ಟೇ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯ ಮೇಲೆ ಚೂರಿ ಇರಿತವಾದ ಬೆನ್ನಲ್ಲೇ ಇಂದು ಭದ್ರಾವತಿಯಲ್ಲೂ ಬಜರಂಗದಳ ಕಾರ್ಯಕರ್ತನ ಮೇಲೆ ನಾಲ್ವರು ಮುಸ್ಲಿಂ ಯುವಕರಿಂದ ಹಲ್ಲೆ ನಡೆದಿದೆ.

ಭದ್ರಾವತಿಯ ನೆಹರು ನಗರದಲ್ಲಿ ನಡೆದ ಘಟನೆಯಾಗಿದ್ದು ಸುನೀಲ್ (25) ಹಲ್ಲೆಗೊಳಗಾದ ಯುವಕ. ಇಂದು ಮುಂಜಾನೆ 8.30 ರ ಸುಮಾರಿಗೆ ಘಟನೆ ನಡೆದಿದ್ದು ಹಲ್ಲೆಗೊಳಗಾದ ಸುನೀಲ್ ನನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲೂ ಪೊಲೀಸ್ ಇಲಾಖೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿದೆ.