BREAKING NEWS ಚಾಕು ಇರಿತಕ್ಕೊಳಗಾದ ಪ್ರೇಮ್ ಸಿಂಗ್ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ ನಿನ್ನೆ ಚಾಕು ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎ ನಾರಾಯಣ ಸ್ವಾಮಿ ಶಿವಮೊಗ್ಗದಲ್ಲಿ ಅಲ್ಪಸಂಖ್ಯಾತರ ಮುಖಂಡರನ್ನು ಕರೆದು ಮಾತನಾಡಲು ಹೇಳಿದ್ದೇನೆ. 15 ಜನರನ್ನು ಗಡಿಪಾರು ಮಾಡುವ ಲೀಸ್ಟ್ ನಲ್ಲಿ ಅಲ್ಪಸಂಖ್ಯಾತ ವ್ಯಕ್ತಿಗಳಿದ್ದಾರೆ. ಅವರನ್ನು ಮುಲಾಜಿಲ್ಲದೇ ಗಡಿಪಾರು ಮಾಡಿ ಎಂದು ಸೂಚಿಸಿರುವುದಾಗಿ ತಿಳಿಸಿದರು.

ಇನ್ನು ಎಸ್ ಡಿ ಪಿ ಐ, ಪಿ ಎಪ್ ಐ ಸಂಘಟನೆಗಳನ್ನು ನಿಷೇಧ ಮಾಡಲು ಸರ್ಕಾರ ಕಾನೂನಿನ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ. ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಆ ತೀರ್ಮಾನ ತೆಗೆದುಕೊಳ್ಳುತ್ತದೆ. ಸಾರ್ವಕರ್ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅಪಸ್ವರ ಎತ್ತಿರೋದು ಕಾಂಗ್ರೆಸ್ಸಿಗರು. ಇಂತಹ ಘಟನೆಗಳಿಗೆ ಕಾಂಗ್ರೆಸ್ ನೇರ ಕಾರಣ. ಕಾಂಗ್ರೆಸ್ ಇಂತಹ ಚಟುವಟಿಕೆಗಳನ್ನು ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಸಚಿವ ಎ ನಾರಾಯಣಸ್ವಾಮಿ ಹರಿಹಾಯ್ದಿದ್ದಾರೆ.