ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಭದ್ರಾವತಿಯಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್.!

ಶಿವಮೊಗ್ಗ: ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಭದ್ರಾವತಿಯಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದೆ. ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿದ್ದಾರೆ.

ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಮುಬಾರಕ್ ಎಂಬಾತ ಹಲ್ಲೆ ನಡೆಸಿದ್ದಾನೆ. ಮುಬಾರಕ್ ಮೇಲೆ ಹಲವು ಪ್ರಕರಣಗಳಿವೆ. ನಿನ್ನೆ ವಿಕಲಚೇತನ ಶರವಣ ಎಂಬುವನ ಮೇಲೆ ಹಲ್ಲೆ ಮಾಡುತ್ತಿದ್ದ ವೇಳೆ ಏಕೆ ಹಲ್ಲೆ ಮಾಡುತ್ತೀರಾ ಎಂದು ಸುನೀಲ್ ಪ್ರಶ್ನಿಸಿದ್ದ ಎನ್ನಲಾಗಿದೆ.

ನಿನ್ನೆ ಸುನೀಲ್ ಪ್ರಶ್ನಿಸಿದ್ದಕ್ಕೆ ಇಂದು ಆತನ ಮೇಲೆ ಹಲ್ಲೆ ನಡೆದಿದೆ. ಕಳೆದ ವಾರವಷ್ಟೇ ಮುಬಾರಕ್ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಇನ್ನು ಮುಬಾರಕ್ ವಿರುದ್ದ ಕ್ರಮ ಕೈಗೊಳ್ಳುವಂತೆ ಹಿಂದು ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.