ಅನಂತನಾಗ್ ಜಿಲ್ಲೆಯಲ್ಲಿ ಭೀಕರ ದುರಂತ: ನದಿಗೆ ಉರುಳಿದ ಬಸ್: 6 ಐಟಿಬಿಪಿ ಯೋಧರು ಹುತಾತ್ಮ

ಕಾಶ್ಮೀರ: ಅನಂತನಾಗ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅವಘಡವೊಂದು ಸಂಭವಿಸಿ ಐಟಿಬಿಪಿ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಉರುಳಿದೆ. ಈ ದುರ್ಘಟನೆಯಲ್ಲಿ 6 ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ. ಹಲವು ಐಟಿಬಿಟಿ ಸಿಬ್ಬಂದಿ ಗಾಯಗೊಂಡಿದ್ದಾರೆ.

39 ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಸಿವಿಲ್ ಬಸ್  ಬ್ರೇಕ್ ಫೇಲ್ ಆದ  ನಂತರ ರಸ್ತೆ ಬದಿಯ ನದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಯೋಧರು ಅಮರನಾಥದಲ್ಲಿ ಕರ್ತವ್ಯ ಮುಗಿಸಿಕೊಂಡು ಪೊಲೀಸ್‌ ಬಸ್‌ನಲ್ಲಿ ಪಾಲ್ಗಾಮ್‌ಗೆ ಮರಳುತ್ತಿದ್ದರು. ಈ ವೇಳೆ ದುರಂತ ನಡೆದಿದೆ. 6 ಮಂದಿ ಐಟಿಬಿಪಿ ಸಿಬ್ಬಂದಿಯ ಪರಿಸ್ಥಿತಿ ಗಂಭೀರವಾಗಿದೆ. ವಿಶೇಷ ಚಿಕಿತ್ಸೆಗಾಗಿ ಅವರನ್ನು ಶ್ರೀನಗರಕ್ಕೆ ವಿಮಾನದಲ್ಲಿ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.