57 ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ  ಪತ್ರ ವಿತರಣೆ

ಭಟ್ಕಳ: 2021-22ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ, ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಯಡಿ ವಸತಿ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಇಲ್ಲಿನ ಪುರಸಭೆಯಲ್ಲಿ ಮಂಗಳವಾರ ನಡೆಯಿತು.

ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ ಬಡವರಿಗೆ ಮನೆ ನಿರ್ಮಾಣದ ಕನಸನ್ನು ನನಸು ಮಾಡುವ ಉದ್ದೇಶದಿಂದ ತಲಾ 2.40 ಲಕ್ಷ ರೂಪಾಯಿ ಸಹಾಯಧನದ, ಒಟ್ಟು 57 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಕಾಮಗಾರಿ ಆದೇಶ  ಪತ್ರವನ್ನು ಶಾಸಕ ಸುನೀಲ ನಾಯ್ಕ ವಿತರಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪರ್ವೇಜ್ ಖಾಸಿಂಜೀ, ಪುರಸಭೆ ಮುಖ್ಯಾಧಿಕಾರಿ ಸುರೇಶ ಉಪಸ್ಥಿತರಿದ್ದರು