ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ: PIL ವಜಾಗೊಳಿಸಿದ ಸುಪ್ರೀಂ

ಬೆಂಗಳೂರು, ಮಾರ್ಚ್​ 26: ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ ಕರ್ನಾಟಕ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಸಂಬಂಧಿಸಿದಂತೆ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದೆ.