ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಮನವಿ

ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ತಾಲೂಕಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಘಟಕದಿಂದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ ಹಾಗೂ ಸುತ್ತಮುತ್ತಲಿನ ತಾಲೂಕುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಇಲ್ಲದಿರುವುದರಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಯನ್ನು ಈಗಾಗಲೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಎಂದು ಪ.ಪಂ ಯಲ್ಲಿ ನಾಮಕರಣ ಮಾಡಲಾಗಿದ್ದು ಆದರೆ ರಾಯಣ್ಣ ಮೂರ್ತಿ ಇಲ್ಲದಿರುವುದು ಬೇಸರದ ಸಂಗತಿ. ಅವರ ದೇಶ ಭಕ್ತಿ ನಾಡ ಪ್ರೀತಿ ಅವರ ಸಾಹಸದ ಗಾತೆಗಳನ್ನು ಮುಂದಿನ ಪಿಳಿಗೆಗೆ ಅರ್ಥಯಿಸಬೇಕಾಗಿದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಆದಕಾರಣ ಬಂಕಾಪುರ-ಯಲ್ಲಾಪುರ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳವನ್ನು ನಿಗದಿ ಮಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.