
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ವಿರಾಮ ಘೋಷಣೆಯಾಗಿದ್ದರೂ ಕೂಡ ಪಾಕಿಸ್ತಾನವು ಗಡಿಯಲ್ಲಿ ಗುಂಡಿನ ದಾಳಿಯನ್ನು ಮುಂದುವರೆಸಿದೆ. ಶನಿವಾರ ಸಂಜೆ ವಿದೇಶಾಂಗ ಸಚಿವಾಲಯವು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ತಿಳಿಸಿತ್ತು. ಮೇ 12 ರಂದು ಎರಡೂ ದೇಶಗಳ ಡಿಜಿಎಂಒಗಳ ನಡುವೆ ಮತ್ತೆ ಮಾತುಕತೆ ನಡೆಯಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದರು.
ಭಾರತ ಹಾಗೂ ಪಾಕಿಸ್ತಾನ ದ ನಡುವೆ ಯುದ್ಧ ವಿರಾಮ ಘೋಷಣೆಯಾಗಿದ್ದರೂ ಕೂಡ ಪಾಕಿಸ್ತಾನವು ಗಡಿಯಲ್ಲಿ ಗುಂಡಿನ ದಾಳಿಯನ್ನು ಮುಂದುವರೆಸಿದೆ. ಶನಿವಾರ ಸಂಜೆ ವಿದೇಶಾಂಗ ಸಚಿವಾಲಯವು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ತಿಳಿಸಿತ್ತು. ಮೇ 12 ರಂದು ಎರಡೂ ದೇಶಗಳ ಡಿಜಿಎಂಒಗಳ ನಡುವೆ ಮತ್ತೆ ಮಾತುಕತೆ ನಡೆಯಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದರು.
ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ನಂತರ, ರಾಂಬನ್ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟನ್ನು ತೆರೆಯಲಾಗಿದೆ. ಇದಲ್ಲದೆ, ರಿಯಾಸಿಯ ಸಲಾಲ್ ಅಣೆಕಟ್ಟಿನ ದ್ವಾರಗಳನ್ನು ಸಹ ತೆರೆಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಖಂಡಿತವಾಗಿಯೂ ಕದನ ವಿರಾಮವಿದೆ. ಆದರೆ ಭದ್ರತಾ ಸಂಸ್ಥೆಗಳು ಇನ್ನೂ ಸಂಪೂರ್ಣವಾಗಿ ಜಾಗರೂಕವಾಗಿವೆ. ಎಸ್ಐಎ ಕುಲ್ಗಾಮ್ನ ಹಲವಾರು ಸ್ಥಳಗಳ ಮೇಲೆ ದಾಳಿ ಮಾಡಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ನಂತರವೂ, ಸೂಕ್ಷ್ಮ ಸ್ಥಳಗಳಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಅಮೃತಸರದಲ್ಲಿರುವ ಶ್ರೀ ಗುರು ರಾಮ್ ದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ನೂ ತೆರೆಯಲಾಗಿಲ್ಲ. ಅದೇ ಸಮಯದಲ್ಲಿ, ಭಾನುವಾರ, ವಿಮಾನ ನಿಲ್ದಾಣದ ಆವರಣದಲ್ಲಿರುವ ಗುರುದ್ವಾರ ಸಂತರ ಜಿಯಲ್ಲಿ ಭಕ್ತರ ಗುಂಪು ಸೇರಲು ಪ್ರಾರಂಭಿಸಿತು.
ಆದರೆ ಭದ್ರತಾ ನಿಯಮಗಳಿಂದಾಗಿ ಭಕ್ತರಿಗೆ ಒಳಗೆ ಪ್ರವೇಶವಿರಲಿಲ್ಲ.
ಭಾರತ-ಪಾಕಿಸ್ತಾನ ಸಂಘರ್ಷ: ಅಮೃತಸರದಲ್ಲಿ ರೆಡ್ ಅಲರ್ಟ್
ಕದನ ವಿರಾಮ ಘೋಷಿಸಿದ್ದರೂ ಕೂಡ ಅಮೃತಸರದಲ್ಲಿ ಸೈರನ್ ಕೇಳುತ್ತಿದೆ. ರೆಡ್ ಅಲರ್ಟ್ ಇದ್ದು ಎಲ್ಲರಿಗೂ ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ.
ಯುದ್ಧ ಭಾರತದ ಆಯ್ಕೆಯಲ್ಲ ಎಂದ ಅಜಿತ್ ದೋವಲ್
ಯುದ್ಧ ಎಂದೂ ಭಾರತದ ಆಯ್ಕೆಯಲ್ಲ’’ ಎಂದು ಭಾರತ ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್(Ajit Doval) ಚೀನಾದ ವಿದೇಶಾಂಗ ಸಚಿವರಿಗೆ ಹೇಳಿದ್ದಾರೆ
ರಕ್ಷಣಾ ಸಚಿವಾಲಯದ ಸುದ್ದಿಗೋಷ್ಠಿ
ನಿನ್ನೆಯ ಕದನ ವಿರಾಮದ ನಂತರ, ಇಲ್ಲಿಯವರೆಗೆ ಯಾವ ರೀತಿ ಬೆಳವಣಿಗೆಯಾಗಿದೆ ಎಂಬುದರ ಕುರಿತು ರಕ್ಷಣಾ ಸಚಿವಾಲಯ ಇಂದು ಪತ್ರಿಕಾಗೋಷ್ಠಿ ನಡೆಸಲಿದೆ.
ಪ್ರಧಾನಿ ಮೋದಿ ಜೊತೆ NSA ಮಹತ್ವದ ಸಭೆ
ಪಾಕಿಸ್ತಾನದೊಂದಿಗಿನ ಗಡಿ ಸಂಘರ್ಷ ಮುಗಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಎನ್ಎಸ್ಎ ದೋವಲ್ ಸಭೆ ನಡೆಯುತ್ತಿದೆ. ಸಿಡಿಎಸ್ ಮತ್ತು ಸೇನಾ ಮುಖ್ಯಸ್ಥರು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.



