ಮರ ಬಿದ್ದು ಸಂಚಾರಕ್ಕೆ ಅಡ್ಡಿ

ಯಲ್ಲಾಪುರ: ತಾಲೂಕಿನಲ್ಲಿ ಕಳೆದ 2-3 ದಿನಗಳಿಂದ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ.
ಗಾಳಿ-ಮಳೆ ಪರಿಣಾಮ ತೇಲಂಗಾರದಿಂದ ಬಳಗಾರಕ್ಕೆ ಹೋಗುವ ರಸ್ತೆಯಲ್ಲಿ ದೊಡ್ಡ ಮರಬಿದ್ದು ಸಂಚಾರಕ್ಕೆ ತೊಂದರೆಯಾಯಿತು. ನಂತರ ಸ್ಥಳೀಯರು ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.