
ಕೋಲಾರ್, ಜೂನ್ 09: ನೂತನ ಚೆನೈ ಟು ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್ ಬಳಿ ನಡೆದಿದೆ. ರಾಜಾಸ್ಥಾನ ಮೂಲದ ಅಶೋಕ್(28) ಮತ್ತು ಮೋಹನ್ ಲಾಲ್(32) ಮೃತರು. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

