ಸ್ಕೌಟ್ ಮತ್ತು ಗೈಡ್ಸ್ ನಿಂದ ಸದ್ಭಾವನಾ ದಿನಾಚರಣೆ

ಯಲ್ಲಾಪುರ: ದೇಶದ ಎಲ್ಲಾ ಧರ್ಮ, ಭಾಷೆಗಳು, ರಾಷ್ಟ್ರೀಯ ಏಕೀಕರಣ ಹಾಗೂ ಕೋಮು ‌ಸೌಹಾರ್ದತೆಯ ಮಹತ್ವ ಎತಗತಿ ಹಿಡಿದಿವೆ. ಪ್ರತಿಯೊಬ್ಬ ವ್ಯಕ್ತಿ ದೇಶಾಭಿಮಾನವವನ್ನು ಬೆಳೆಸಿಕೊಂಡು ದೇಶದ ಸಂಸ್ಕಾರಯುತ ಪ್ರಜೆಗಳಾಗೋಣ ಎಂದು ಪ.ಪಂ ಅಧ್ಯಕ್ಷೆ ಸುನಂದಾ ದಾಸ್ ಹೇಳಿದರು. ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಘಟಿಸಿದ್ದ ಸದ್ಭಾವನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ದೇಶದ ನಾಗರಿಕರಾದ ನಾವು ಭಾವೈಕ್ಯತೆ, ಸೌಹಾರ್ದ ಗುಣಗಳನ್ನು ಬೆಳೆಸಿಕೊಳ್ಳೋಣ ಎಂದರು.

ಹಿಂದು ಜಾಗರಣಾ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ, ಫಾ. ಬಸ್ತ್ಯಾಂವ ನಜರತ್, ಮುಸ್ಲಿಂ ಧರ್ಮಗುರು ಮಹಮ್ಮದ್ ಮನ್ಸೂರ್, ಭಾರತ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ನಂದನ ಬಾಳಗಿ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಹಾಗೂ ಮತ್ತಿತರು ಉಪಸ್ಥಿತರಿದ್ದರು. ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.