ಲಾರಿ ಮತ್ತು ಬೈಕ್ ನಡುವೆ ಭೀಕರ ದುರ್ಘಟನೆ – ಇಬ್ಬರು ಸ್ಥಳದಲ್ಲೇ ಸಾವು

ನೆಲಮಂಗಲ: ಲಾರಿ ಮತ್ತು ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.

ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶ್ರೀರಾಮಪುರದ ಯುವಕ ಪ್ರಜ್ವಲ್ (22), ಯುವತಿ ಸಹನಾ (21) ಮೃತ ದುರ್ದೈವಿಗಳು.

ಕುಣಿಗಲ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಲಾರಿ ಸಮೇತ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.