ಭಾರತ ಕ್ರಿಕೆಟ್ ತಂಡದ ಟಿ20 ನಾಯಕ  ಸೂರ್ಯಕುಮಾರ್ ಯಾದವ್ ಆಸ್ಪತ್ರೆಯಲ್ಲಿ  ವಿರಾಮ

ಬೆಂಗಳೂರು (ಜೂ. 26): ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಪ್ರಸ್ತುತ ವಿರಾಮದಲ್ಲಿದ್ದಾರೆ. ಸೂರ್ಯ ಇತ್ತೀಚೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆದರೀಗ ಅವರು ಜರ್ಮನಿಯಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಮಾನಿಗಳಿಗಾಗಿ ದೊಡ್ಡ ಅಪ್ಡೇಟ್ ನೀಡಿದ್ದಾರೆ. ಇತ್ತೀಚೆಗಷ್ಟೆ ಸೂರ್ಯಕುಮಾರ್ ಯಾದವ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಸೂರ್ಯಕುಮಾರ್ ಯಾದವ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು

ಶಸ್ತ್ರಚಿಕಿತ್ಸೆಯಿಂದಾಗಿ ಅವರು ಮುಂಬವರು ಬಾಂಗ್ಲಾದೇಶ ಪ್ರವಾಸಕ್ಕೆ ಹೋಗುವ ಸಾಧ್ಯತೆ ಕಡಿಮೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಅವರಿಗೆ 6 ರಿಂದ 12 ವಾರಗಳು ಬೇಕಾಗುತ್ತದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಇವರು ಮಹತ್ವದ ಪಾತ್ರ ವಹಿಸಲಿದ್ದಾರೆ. ರೋಹಿತ್ ಶರ್ಮಾ ನಂತರ, ಬಿಸಿಸಿಐ ಇವರಿಗೆ ಟಿ20 ತಂಡದ ನಾಯಕತ್ವ ನೀಡಿದೆ.

ಟಿ20 ತಂಡಕ್ಕೆ ಸೂರ್ಯ ಮುಖ್ಯ

ಸೂರ್ಯಕುಮಾರ್ ಯಾದವ್ ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರ. ಅವರು ಟಿ20 ಕ್ರಿಕೆಟ್‌ನಲ್ಲಿ ಹಲವು ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಅವರ ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತಿದ್ದಾರೆ. ಭಾರತೀಯ ಕ್ರಿಕೆಟ್ ತಂಡ ಪ್ರಸ್ತುತ ಇಂಗ್ಲೆಂಡ್‌ನಲ್ಲಿದೆ. ಅಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ 5-ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದೆ. ಇದರ ನಂತರ ತಂಡವು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಬಾಂಗ್ಲಾದೇಶದಲ್ಲಿ ಏಕದಿನ ಮತ್ತು ಟಿ20 ಸರಣಿಗಳು ನಡೆಯಲಿವೆ. ಮೊದಲ ಟಿ20 ಪಂದ್ಯ ಆಗಸ್ಟ್ 26 ರಂದು ಮತ್ತು ಕೊನೆಯ ಪಂದ್ಯ ಆಗಸ್ಟ್ 31 ರಂದು ನಡೆಯಲಿದೆ.

ಸೂರ್ಯಕುಮಾರ್ ಯಾದವ್ ಈ ಪ್ರವಾಸಕ್ಕೆ ಹೋಗುವ ಸಾಧ್ಯತೆ ಕಡಿಮೆ. ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳಲು 6 ರಿಂದ 12 ವಾರಗಳು ಬೇಕಾಗುತ್ತದೆ. ಆದ್ದರಿಂದ ಅವರು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತಾರೆ. ಮುಂದಿನ ವರ್ಷದ ಫೆಬ್ರವರಿಯಲ್ಲಿ ಟಿ20 ದೊಡ್ಡ ಟೂರ್ನಿ ನಡೆಯಲಿದೆ. ಟಿ20 ವಿಶ್ವಕಪ್ 2026 ಫೆಬ್ರವರಿ-ಮಾರ್ಚ್‌ನಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಒಟ್ಟು 20 ತಂಡಗಳು ಇದರಲ್ಲಿ ಆಡಲಿವೆ. ಸೂರ್ಯಕುಮಾರ್ ಯಾದವ್ ಈ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಸೂರ್ಯಕುಮಾರ್ ಯಾದವ್ 30 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅವರು 1 ಟೆಸ್ಟ್, 37 ಏಕದಿನ ಮತ್ತು 83 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಏಕದಿನ ಪಂದ್ಯಗಳಲ್ಲಿ 773 ರನ್ ಮತ್ತು ಟಿ20ಗಳಲ್ಲಿ 2598 ರನ್ ಗಳಿಸಿದ್ದಾರೆ. ಅವರು ಏಕದಿನ ಪಂದ್ಯಗಳಲ್ಲಿ 4 ಅರ್ಧಶತಕಗಳನ್ನು ಗಳಿಸಿದ್ದಾರೆ. ಅವರು ಟಿ20ಗಳಲ್ಲಿ 4 ಶತಕ ಮತ್ತು 21 ಅರ್ಧಶತಕಗಳನ್ನು ಗಳಿಸಿದ್ದಾರೆ.