ಕರಿಯ ಚಿತ್ರದ ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸಂತೋಷ್ ಬಾಲರಾಜ್ (38) ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕಳೆದ ತಿಂಗಳು ಜಾಂಡೀಸ್ನಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮರಳಿದ್ದ ಸಂತೋಷ್ ಮತ್ತೆ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೊಲೋ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ತೀರ ಗಂಭೀರ ಸ್ಥಿತಿ ತಲುಪಿದೆ.
ಗಣಪ, ಕರಿಯ-2, ಕೆಂಪ, ಬರ್ಕ್ಲೀ ಚಿತ್ರಗಳಲ್ಲಿ ಸಂತೋಷ್ ನಟಿಸಿದ್ದಾರೆ. ಅವರ ಅಭಿನಯದ ಸತ್ಯ ಚಿತ್ರ ರಿಲೀಸಾಗಬೇಕಿತ್ತು. ಎಲ್ಲರ ಜತೆ ಸದಾ ನಗು ನಗುತ್ತಲೇ ಸ್ನೇಹದಿಂದ ಮಾತನಾಡುತ್ತಿದ್ದ ಸಂತೋಷ್ ಒಂದೂವರೆ ವರ್ಷದ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದರು. ಸದ್ಯದಲ್ಲೇ ಮದುವೆಯಾಗುವ ಸಿದ್ಧತೆಯನ್ನೂ ನಡೆಸಿದ್ದರು.
ತಂಗಿ ಹಾಗೂ ತಾಯಿಯ ಜೊತೆ ಸಂತೋಷ್ ವಾಸವಾಗಿದ್ದರು. ತಾಯಿ ಕೂಡ ಅನಾರೋಗ್ಯದಿಂದ ಓಡಾಡುವ ಸ್ಥಿತಿಯಲ್ಲಿಲ್ಲ.
