ಬೆಂಗಳೂರು: ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ನಟ ಧೃವ ಸರ್ಜಾ ವಿರುದ್ಧ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಘವೇಂದ್ರ ಹೆಗ್ಗಡೆ ಎಂಬುವವರು ಧೃವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
