ಬಾಗಲಕೋಟೆ, (ಆಗಸ್ಟ್ 09): ಸಹಪಾಠಿಗಳ ರ್ಯಾಗಿಂಗ್ ಗೆ ಮನನೊಂದ ಎಂಎ ಅಂತಿಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ರ್ಯಾಗಿಂಗ್ ಬಗ್ಗೆ ಡೆತ್ ನೋಟ್ ಬರೆದಿಟ್ಟು ಅಂಜಲಿ ಮುಂಡಾಸ(21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಅಂಜಲಿ, ನಿನ್ನೆ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ , ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾವಿಗೆ ಶರಣಾಗಿದ್ದಾರೆ. ಇನ್ನು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರ ಹೆಸರು ಹಾಗೂ ಅವರ ಮೊಬೈಲ್ ನಂಬರ್ ಬರೆದಿಟ್ಟಿದ್ದಾಳೆ.
ನನ್ನ ಸಾವಿಗೆ ಕಾರಣ ವರ್ಷಾ ಜಮ್ಮನಕಟ್ಟಿ ಹಾಗೂ ಪ್ರದೀಪ್ ಅಳಗುಂದಿ ಕಾರಣ. ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ, ನನಗೆ ಮಾರಕವಾಗಿದ್ದಾರೆ. ಇವರನ್ನು ಸುಮ್ಮನೆ ಬಿಡಬೇಡಿ. ಗುಡ್ ಬೈ ಎಂದು ಸಹಿ ಮಾಡಿ ಆತ್ಮಹತ್ಯಗೆ ಶರಣಾಗಿದ್ದಾಳೆ. ಈ ಸಂಬಂಧ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಡೆತ್ ನೋಟ್ ನಲ್ಲಿದೆ?
ನನ್ನ ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ.ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು ನನ್ನ ಬಗ್ಗೆ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಮತ್ತು ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಎಂದು ಸಹಿ ಮಾಡಿದ್ದಾರೆ.
