ಕೈಕೊಟ್ಟ ಬೆಳೆ, 15 ಲಕ್ಷ ಸಾಲ.! ಮನನೊಂದು ರೈತ ಆತ್ಮಹತ್ಯೆ

ಬಳ್ಳಾರಿ: ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ನಡೆದಿದೆ. ರಾಮಪ್ಪ (30) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ರೈತ ಬ್ಯಾಂಕಿನಲ್ಲಿ ಮೂರು ಲಕ್ಷ, ಖಾಸಗಿಯಾಗಿ 15 ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಮೆಣಸಿನಕಾಯಿ ಅಂಜೂರ ಮೆಕ್ಕೆ ಜೋಳ ಬೆಳೆ ಕೈ ಕೊಟ್ಟ ಹಿನ್ನೆಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುರುಗೋಡು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.