ಮೊಟ್ಟೆ ಎಸೆದಿದ್ದು ನಾನೇ.! ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಸಂಪತ್.!

ಕೊಡಗು: ನೆರೆಹಾನಿ ವೀಕ್ಷಣೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್‌ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಾನು ಕಾಂಗ್ರೆಸ್ ಕಾರ್ಯಕರ್ತ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದಿದ್ದರು. ಈ ರೀತಿ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ನಾನು ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಮೊಟ್ಟೆ ಎಸೆದ ಸಂಪತ್ ಸ್ಪಷ್ಟನೆ ನೀಡಿದ್ದಾನೆ.

ಇನ್ನು, ಕೋರ್ಟ್​ಗೆ ಶರಣಾಗಲು ಬಂದಾಗ ಆರೋಪಿ ಸಂಪತ್​ನನ್ನು ಪೊಲೀಸ್ರು ಬಂಧಿಸಿದ್ದಾರೆ. ಕುಶಾಲನಗರದ ನ್ಯಾಯಾಲಯ ಆವರಣದಲ್ಲಿ ಬಂಧನ ಮಾಡಿದ ಪೊಲೀಸ್ರು ಈಗ ವಿಚಾರಣೆಗೆ ಒಳಪಡಿಸಿದ್ದಾರೆ.