ಬೆಳಗಾವಿ: ತನ್ನ ವಿವಾಹಿತ ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಕೊಂದ ಬಳಿಕ ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ರೇಷ್ಮಾ (29), ಆನಂದ ಸತಾರ್ನನ್ನು (31) ಮೃತ ಪ್ರೇಮಿಗಳು. ಆನಂದ ಮೂರು ಮಕ್ಕಳ ತಂದೆಯಾಗಿದ್ದರೆ, ರೇಷ್ಮಾ 2 ಮಕ್ಕಳ ತಾಯಿಯಾಗಿದ್ದಳು.
ಪಾಗಲ್ ಪ್ರೇಮಿ ಆನಂದ ಮದ್ವೆ ಬಳಿಕವೂ ವಿವಾಹಿತೆ ರೇಷ್ಮಾ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ. ನನ್ನ ಹೆಂಡ್ತಿಯಂತೆ ನೀನೂ ನನ್ನ ಮಾತು ಕೇಳಬೇಕು ಅಂತ ಆಕೆಯನ್ನ ಪೀಡಿಸುತ್ತಲೇ ಇದ್ದ. ಇದೀಗ ಪ್ರೇಯಸಿಯನ್ನ 9 ಬಾರಿ ಇರಿದು ಕೊಂದಿದ್ದಾನೆ. ಆಕೆ ಸಾವನಪ್ಪುತ್ತಿದ್ದಂತೆ ಭಯಗೊಂಡು ತಾನೂ ಅದೇ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆನಂದನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಆನಂದ ಸಾವನ್ನಪ್ಪಿದ್ದಾನೆ.
ಆಂಟಿ-ಅಂಕಲ್ ಲವ್ವಿಡವ್ವಿ ಸ್ವಾರಸ್ಯ ಏನು?
ಆನಂದ ಮದುವೆ ಬಳಿಕವೂ ರೇಷ್ಮಾ ಜೊತೆಗೆ 3 ವರ್ಷಗಳಿಂದ ಸಲುಗೆ ಹೊಂದಿದ್ದ. ಒಂದೇ ಊರಿನ, ಒಂದೇ ಕಾಲೊನಿಯ ಇಬ್ಬರ ಮಧ್ಯೆ ಹಲವು ವರ್ಷಗಳಿಂದ ಸ್ನೇಹ ಇತ್ತು. ಮದುವೆ ಬಳಿಕ ಸಲುಹೆ ಹೆಚ್ಚಾಗಿ ಅದು ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಕಳೆದ ತಿಂಗಳಷ್ಟೇ ರೇಷ್ಮಾ ಪತಿ ಕೈಗೆ ಇಬ್ಬರೂ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ನಂದಗಡ ಪೊಲೀಸರಿಗೆ ಮಾಹಿತಿ ರೇಷ್ಮಾ ಪತಿ ಶೀವು ತಿರವಿರ ಮಾಹಿತಿ ನೀಡಿದ್ದ.
ಪೊಲೀಸರ ವಾರ್ನ್ ಬಳಿಕ ಆನಂದನಿಂದ ರೇಷ್ಮಾ ಅಂತರ ಕಾಯ್ದುಕೊಂಡಿದ್ದಳಿ. ಇದರಿಂದ ಸಿಟ್ಟಿಗೆದ್ದ ಪಾಗಲ್ ಆನಂದ ಮನೆಯ ಹಿಂಬಾಗಿಲಿನಿಂದ ಹೋಗಿ ರೇಷ್ಮಾಳನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರೇಷ್ಮಾ ಪುತ್ರಿಯ ಎದುರೇ ಚಾಕುವಿನಿಂದ 9 ಸಲ ಚುಚ್ಚಿ ಹತ್ಯೆಗೈದಿದ್ದಾನೆ. ಬಳಿಕ ಹೆದರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

