ಹಾಡಹಗಲೇ ಮನೆ ಬೀಗ ಮುರಿದು ಚಿನ್ನಾಭರಣ ಹಾಗೂ ಹಣವನ್ನು ದೋಚಿದ ಕಳ್ಳರು.!

ರಾಯಚೂರು: ಹಾಡಹಗಲೇ ತಾಲೂಕಿನ ಗಿಲ್ಲೆಸುಗೂರು ಕ್ಯಾಂಪ್ ನಲ್ಲಿ ಮನೆಗಳ್ಳತನ ನಡೆದಿದೆ. ಕಳ್ಳರು ಮನೆ ಬೀಗ ಮುರಿದು ಒಳ ನುಗ್ಗಿ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ಶ್ರೀನಿವಾಸ್ ಎಂಬುವವರಿಗೆ ಸೇರಿದ ಮನೆ ಕಳ್ಳತನವಾಗಿದ್ದು ಮನೆಯ ಬೀರುವಿನಲ್ಲಿದ್ದ 30 ಗ್ರಾಂ ಚಿನ್ನಾಭರಣ, 1.25 ಲಕ್ಷ ರೂಪಾಯಿ ನಗದು ಹಣವನ್ನು ಖದೀಮರು ದೋಚಿದ್ದಾರೆ.

ಶ್ರೀನಿವಾಸ್ ಹಾಗೂ ಆತನ ಪತ್ನಿ ಕೆಲಸಕ್ಕೆ ಹೋಗಿದ್ದರು.‌ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋಡಿಕೊಂಡು ಸುತ್ತಮುತ್ತ ಸಹ ಜನ ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ.