ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢ.! ಇಬ್ಬರ ವಿರುದ್ಧ ಪ್ರಕರಣ ದಾಖಲು

ಕಾರವಾರ: ಅಮಲಿನಲ್ಲಿದ್ದ ಇಬ್ಬರು ಯುವಕರ ವಿರುದ್ಧ ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಹೊಟೇಲ್ ಮ್ಯಾನೇಜ್‌ಮೆಂಟ್ ಉದ್ಯೋಗಿಯಾಗಿರುವ ತಾಲೂಕಿನ ಕಡವಾಡದ ನಿವಾಸಿ ಕಾರ್ತಿಕ ದೀಪಕ ಕಡಲವಾಡಕರ (22) ಹಾಗೂ ಪ್ಲಿಪ್‌ಕಾರ್ಟ್ನಲ್ಲಿ ಉದ್ಯೋಗಿಯಾಗಿರುವ ನಗರದ ಮಾಲಾದೇವಿ ಮೈದಾನದ ಎದುರಿನ ನಿವಾಸಿ ಸುಲೇಮಾನ ಇಮ್ರಾನ್ ಶೇಖ್ (21) ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಭಾನುವಾರ ರಾತ್ರಿ 10.30 ರ ಸುಮಾರಿಗೆ ನಗರದ ಬಾಂಡಿಶಿಟ್ಟಾ ಕ್ರಾಸ್‌ನಲ್ಲಿ ಶಹರ ಠಾಣೆಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅಮಲು ಪದಾರ್ಥ ಸೇವಿಸಿರುವುದು ಕಂಡು ಬಂದ ಹಿನ್ನೆಲೆ ಇಬ್ಬರನ್ನೂ ಕಿಮ್ಸ್ ಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ವರದಿಯಲ್ಲಿ ಇಬ್ಬರೂ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳ ವಿರುದ್ಧ ಶಹರ ಠಾಣೆ ಪಿಎಸ್‌ಐ ಸಂತೋಷ ಕುಮಾರ ಎಂ. ತಡರಾತ್ರಿ 1.30 ಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.