ಹೊನ್ನಾವರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಂಘದ ಸಭೆಯಲ್ಲಿ ತಾಲೂಕ ಸಂಘದ ನೂತನ ಅಧ್ಯಕ್ಷರಾಗಿ ವಿನಾಯಕ ಮೇಸ್ತ್, ಉಪಾಧ್ಯಕ್ಷರಾಗಿ ದಿನೇಶ ಹೆಗಡೆ, ಕಾರ್ಯದರ್ಶಿಯಾಗಿ ಪ್ರಸಾದ ಹೆಗಡೆ, ಖಜಾಂಚಿಯಾಗಿ ವಿವೇಕ ಶೇಟ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯ್ತು. ಸಂಘದ ನೂತನ ಪದಾಧಿಕಾರಿಗಳಿಗೆ ನಿಕಟಪೂರ್ವ ಪದಾಧಿಕಾರಿಗಳು ಜವಾಬ್ದಾರಿಯನ್ನು ಹಸ್ತಾಂತರಿಸಿದರು…

