ಗಣೇಶೋತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರರಿಗೂ ಗೌರವ ಸಲ್ಲಿಸಲು ಸಮಿತಿ ನಿರ್ಧಾರ.!

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ವಿಭಿನ್ನವಾಗಿ ಗೌರವ ಸಲ್ಲಿಸಲು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಿರ್ಧರಿಸಿದೆ. ಗಣೇಶೋತ್ಸವ ಮಂಟಪದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ, ಅವರಿಗೂ ಭಗವಂತನ ಜೊತೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಲು ಜನರಲ್ಲಿ ಮನವಿ ಮಾಡಿಕೊಂಡಿದೆ. ಆ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲು ಗಣೇಶೋತ್ಸವ ಸಮಿತಿ ಮನವಿ ಮಾಡಿದೆ. ಅಲ್ಲದೇ ಈ ಕುರಿತು ಸಮಿತಿ ಪೋಸ್ಟರ್ ಸಹ ಬಿಡುಗಡೆ ಮಾಡಿದೆ.