ಐಇಸಿ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ: ಹೇಗೆ ಅರ್ಜಿ ಸಲ್ಲಿಸಬೇಕು.?

ಕಾರವಾರ: ಉತ್ತರಕನ್ನಡ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಖಾಲಿ ಇರುವ ಐಇಸಿ ಸಂಯೋಜಕರ ಹುದ್ದೆಗೆ ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಸಮೂಹ ಸಂವಹನ ವಿಷಯದಲ್ಲಿ ಡಿಪ್ಲೋಮಾ ಜೊತೆಗೆ ಗಣಕಯಂತ್ರ ಜ್ಞಾನ, ಮತ್ತು ಕನಿಷ್ಠ 2 ರಿಂದ 3 ವರ್ಷದ ಅನುಭವ ಹೊಂದಿದ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಆನ್‌ಲೈನ್ ವೆಬ್‌ಸೈಟ್ http://zpkarwar.kar.nic.in ನಲ್ಲಿ ಸೆಪ್ಟಂಬರ್ 3 ರೊಳಗೆ ಅರ್ಜಿ ಸಲ್ಲಿಸಬೇಕು.

ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಮತ್ತು ಫೊಟೋಶಾಪ್, ಕೋರಲ್ ಡ್ರಾ, ವಿಡೀಯೋ ಎಡಿಟಿಂಗ್ ಕೌಶಲ್ಯ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382-226862 ಗೆ ಸಂಪರ್ಕಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.