ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್.!

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅವಕಾಶ ನೀಡಬಹುದೆಂದು ಹೈಕೋರ್ಟ್ ತಿಳಿಸಿದೆ. ಆ. 31 ರಿಂದ ಶರತ್ತು ಬದ್ಧ ಅನುಮತಿ ನೀಡಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದು, ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೇಳಿದೆ. ಮಧ್ಯಂತರ ಆದೇಶ ಪ್ರ್ನಶ್ನಿಸಿ ಸರ್ಕಾರ ಈ ಕುರಿತು ಮೇಲ್ಮನವಿ ಸಲ್ಲಿಸಿತ್ತು. ಹಿಂದಿನ ಮಧ್ಯಂತರ ಆದೇಶವನ್ನು ಮರು ಪರಿಶೀಲಿಸಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.