ಗಾಂಧಿವನ ಕ್ರೀಡಾಂಗಣದಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಕ್ರೀಡಾಕೂಟ

ಕುಮಟಾ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳುವುದರ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತರಬೇಕು ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕಡ್ಲೆಯ ಗಾಂಧಿವನ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ, ಬಾಡದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ತಾಲೂಕಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಬಾಡದ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಮೋಹನ ನಾಯಕ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಎಸ್.ಎಸ್.ಭಟ್ಟ ಲೊಕೇಶ್ವರ, ನೆಲ್ಲಿಕೇರಿ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಸತೀಶ ನಾಯ್ಕ, ಬಾಡ ಗ್ರಾ.ಪಂ ಅಧ್ಯಕ್ಷ ದಾವೂದ ಬಿಕಬಾ, ಕಾಗಾಲ ಗ್ರಾ.ಪಂ ಅಧ್ಯಕ್ಷ ಶಶಿಕುಮಾರ ನಾಯ್ಕ ಸೇರಿದಂತೆ ಮತ್ತಿತರರು ಇದ್ದರು.