ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಜಿ. ಟಿ ದೇವೇಗೌಡ ಅಚ್ಚರಿಯ ಹೇಳಿಕೆ.!

ಮೈಸೂರು: ಮುಂದಿನ ರಾಜಕೀಯ ನಿರ್ಧಾರ ನವೆಂಬರ್‌ಗೆ ತಿಳಿಸುತ್ತೇನೆ. ಅಲ್ಲಿಯವರೆಗೂ ನಾನು ನನ್ನ ಕ್ಷೇತ್ರದ ಕಡೆ ಮಾತ್ರ ಗಮನಿಸುತ್ತೇನೆ ಎಂದು ಮೈಸೂರಿನಲ್ಲಿ ಶಾಸಕ ಜಿ ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ನಿನ್ನೆ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕು
ನೀವು ಕುಮಾರಸ್ವಾಮಿ ಒಟ್ಟಿಗೆ ಚೆನ್ನಾಗಿರಬೇಕು ಎಂದು ಸೂಚಿಸಿದ್ದರು. ಸ್ವಾಮೀಜಿಯವರ ಆಶಯದಂತೆ ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ದೇವೇಗೌಡರ ಜೊತೆ ಮಾತನಾಡಲು ಹೇಳಿದ್ದಾರೆ. ನವೆಂಬರ್‌ ನಲ್ಲಿ ಹೆಚ್ ಡಿ ದೇವೇಗೌಡರ ಜೊತೆ ಮಾತನಾಡುತ್ತೇನೆ. ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ.

ನಿನ್ನೆ ನನ್ನ ಅಥವಾ ಮಗನ ಟಿಕೆಟ್ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಡಿ ಕೆ ಶಿವಕುಮಾರ್ ಸಹಾ ಜಿಟಿಡಿ ನಮ್ಮ ಜೊತೆ ಇರುತ್ತಾರೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ‌ ಬಳಿ ಹೇಳಿದ್ದಾರೆ. ಆದರೆ ನಾನು ಕಾಂಗ್ರೆಸ್, ಜೆಡಿಎಸ್ ಅಥವಾ ಬಿಜೆಪಿ ಯಾವುದನ್ನು ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.