ಲಾರಿ ಅಡ್ಡ ಹಾಕಿ ಹಣಕ್ಕೆ ಡಿಮಾಂಡ್.! ನಾಲ್ವರು ನಕಲಿ ಪತ್ರಕರ್ತರು ಅರೆಸ್ಟ್.!

ಚಿಕ್ಕೋಡಿ : ಹೆದ್ದಾರಿಯಲ್ಲಿ ಲಾರಿಗೆ ಅಡ್ಡ ಹಾಕಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಕಲಿ ಬ್ಲ್ಯಾಕ್ ಮೇಲ್ ಪತ್ರಕರ್ತರನ್ನು ಯಮಕನಮರಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಿರಣ ಗಾಯಕವಾಡ್, ಸಚೀನ ಕಾಂಬಳೆ, ಸಂತೋಷ ದೊಡ್ಡಮನಿ, ದಾದು ವಿಶ್ವನಾಥ ಲೋಕಂಡೆ ಬಂಧಿತ ನಕಲಿ ಪತ್ರಕರ್ತರು ಬಂಧಿತರು. ಹುಕ್ಕೇರಿ ತಾಲೂಕಿನ ನದಿಗುಡಿಕ್ಷೇತ್ರ ಗ್ರಾಮದ ಶಿವಾನಂದ ಹುಕ್ಕೇರಿ ಮಾಲಿಕತ್ವದ ಲಾರಿಯಲ್ಲಿ ಜೋಳದ ಫೀಡ್ಸ್ ಲೋಡ್ ಮಾಡಿಕೊಂಡು ಸಾಗುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಅಡ್ಡಗಟ್ಟಿ ಬಂಧಿತ ನಕಲಿ ಪತ್ರಕರ್ತರು ನಾವು ಪತ್ರಕರ್ತರಿದ್ದೇವೆ ನಿಮ್ಮ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿದೆ ಎಂದು ಧಮ್ಕಿ ಹಾಕಿದ್ದಾರೆ. ಹಣ ಕೊಡದಿದ್ದರೆ ಫುಡ್‌ ಇನ್ಸ್ಪೆಕ್ಟರ್ ಹಾಗೂ ಪೊಲೀಸರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಕುರಿತು ನಾಲ್ವರು ನಕಲಿ ಪತ್ರಕರ್ತರ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‌ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.