ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹ

ಯಲ್ಲಾಪುರ: ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಾಲೂಕು ಬೇಡ ಜಂಗಮ ಒಕ್ಕೂಟದಿಂದ ಪಟ್ಟಣದಲ್ಲಿ ಸೋಮವಾರ ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಒಕ್ಕೂಟ ಬೆಂಬಲ ಸೂಚಿಸುತ್ತದೆ. ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿರುವ ಬೇಡ ಜಂಗಮ, ಬುಡ್ಗ ಜಂಗಮ, ಮಾಲ ಜಂಗಮರನ್ನು ಗುರುತಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿದರು.

ಒಕ್ಕೂಟದ ಅಧ್ಯಕ್ಷ ಬಿ.ಎಸ್.ನಂದೊಳ್ಳಿಮಠ, ಪ್ರಮುಖರಾದ ಶಿವಯೋಗಿ, ಮಲ್ಲಿಕಾರ್ಜುನ ಹಿರೇಮಠ, ಗಂಗಾಧರಯ್ಯ ಕೂರಿಮಠ, ಮಂಜುನಾಥ ಹಿರೇಮಠ, ರತ್ನಾ ಪಾಟೀಲ, ಗೌರಿ ನಂದೊಳ್ಳಿಮಠ, ಓಂಕಾರಯ್ಯ ಹಿರೇಮಠ ಇತರರಿದ್ದರು.