ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ.!

ಆಗುಂಬೆಯಲ್ಲಿ ಮುಂದುವರಿದ ಮಳೆ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ಇನ್ನೂ ಒಂದು ತಿಂಗಳ ಕಾಲ ನಿಷೇಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಆದೇಶಿಸಿದ್ದಾರೆ.

ಆಗುಂಬೆ ಭಾಗದಲ್ಲಿ ಸುರಿದ ಮಳೆಯಿಂದಾಗಿ ಘಾಟಿಯ 11 ನೇ ತಿರುವಿನಲ್ಲಿ ಭೂ ಕುಸಿತ ಉಂಟಾಗಿತ್ತು. ಈ ಹಿನ್ನೆಲೆ ಘಾಟಿಯಲ್ಲಿ ಆಗಸ್ಟ್ 31ರ ವರೆಗೆ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು.

ಆದರೆ ಈ ಭಾಗದಲ್ಲಿ ಮಳೆ ಮುಂದುವರೆದಿದೆ. ಅಲ್ಲದೆ ಭೂಮಿ ಕುಸಿತದ ಸಾದ್ಯತೆ ಇದೆ. ಹೀಗಾಗಿ ಭಾರಿ ವಾಹನ ಸಂಚಾರ ನಿಷೇಧವನ್ನು ವಿಸ್ತರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು.

ನಿಷೇಧ ಮತ್ತೆ ವಿಸ್ತರಣೆ

ಮಳೆ ಕಾರಣದಿಂದಾಗಿ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧದ ಆದೇಶವನ್ನು ವಿಸ್ತರಿಸಲಾಗಿದೆ. ಸೆಪ್ಟೆಂಬರ್ 30 ರವರೆಗೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.