ಇಡಗುಂಜಿಯಲ್ಲಿ ಗಣೇಶ ಚತುರ್ಥಿ ವಿಶೇಷ.! ವಿಘ್ನ ವಿನಾಯಕನ ದರ್ಶನ ಪಡೆಯಲು ನೆರೆದ ಜನಸ್ತೋಮ.!

ಇಡಗುಂಜಿ: ಗಣೇಶ ಚತುರ್ಥಿ ಹಿನ್ನಲೆಯಲ್ಲಿ
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಇಡಗುಂಜಿ ಮಹಾಗಣಪತಿ ಕ್ಷೇತ್ರಕ್ಕೆ ಜನಸಾಗರವೇ ಹರಿದು ಬರುತಿದ್ದು ಮುಂಜಾನೆಯಿಂದ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಹಾಗಣಪತಿ ದೇವರ ದರ್ಶನ ಪಡೆದರು. ಚತುರ್ಥಿ ಹಿನ್ನಲೆಯಲ್ಲಿ ಇಂದು ಇಡಗುಂಜಿಯಲ್ಲಿ ಮಹಾಗಣಪತಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಕಳೆದ ಎರಡು ವರ್ಷದಿಂದ ಕರೋನಾ ಕಾರಣಕ್ಕೆ ಸಾರ್ವಜನಿಕರಿಗೆ ವಿಶೇಷ ಪೂಜೆ ಹಾಗೂ ಚತುರ್ಥಿಯಂದು ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಸಾರ್ವಜನಿಕರಿಗೆ ವಿಶೇಷ ಪೂಜೆಗೆ ಅವಕಾಶ ನೀಡಿದ್ದರಿಂದ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ.