‘ಗಂಟೆ ಗಣಪತಿ’ ದೇಗುಲಕ್ಕೆ ಭಕ್ತರ ದಂಡು.! ಗಜವದನನ ದರ್ಶನ ಪಡೆದು ಪುನೀತರಾದ ಭಕ್ತರು.!

ಯಲ್ಲಾಪುರ: ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಮಹಾಗಣಪತಿ ಹವನ, ಪಂಚಾಮೃತಾಭಿಷೇಕ, ದೂರ್ವಾರ್ಚನೆ, ಅಥರ್ವಶೀರ್ಷ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ಘಂಟೆ ಗಣಪನ ದರ್ಶನ ಪಡೆದು, ಪೂಜೆ ಪ್ರಾರ್ಥನೆ ಸಲ್ಲಿಸಿದರು.