ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಪ್ರಾಥಮಿಕ ಶಾಲಾ ವಿಭಾಗದಲ್ಲಿ 3, ಪ್ರೌಢಶಾಲಾ ವಿಭಾಗದಲ್ಲಿ 2 ಶಿಕ್ಷಕರು ಆಯ್ಕೆ

ಯಲ್ಲಾಪುರ: ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು, ಪ್ರಾಥಮಿಕ ಶಾಲಾ ವಿಭಾಗದ ಮೂರು ಹಾಗೂ ಪ್ರೌಢಶಾಲಾ ವಿಭಾಗದ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಟ್ಟಿಗೆ ಸ.ಹಿ.ಪ್ರಾ ಶಾಲೆಯ ಮುಖ್ಯಾಧ್ಯಾಪಕ ಗಣಪತಿ ಕೃಷ್ಣ ಭಟ್ಟ, ಮಲವಳ್ಳಿ ಸ.ಹಿ.ಪ್ರಾ ಶಾಲೆಯ ಮುಖ್ಯಾಧ್ಯಾಪಕ ಸಂತೋಷ ಹೊನ್ನಪ್ಪ ಕೊಳಗೇರಿ ಹಾಗೂ ತುಂಬೆಬೀಡು ಸ.ಹಿ.ಪ್ರಾ ಶಾಲೆಯ ಶಿಕ್ಷಕಿ ಪಾರ್ವತಿ ನಾಯ್ಕ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಪಟ್ಟಣದ ಕಾಳಮ್ಮನಗರ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ದೇವಿದಾಸ ನಾರಾಯಣ ಪಟಗಾರ ಹಾಗೂ ಭರತನಹಳ್ಳಿ ಪ್ರಗತಿ ವಿದ್ಯಾಲಯದ ಮುಖ್ಯಾಧ್ಯಾಪಕ ವಿನಾಯಕ ಹೆಗಡೆ ಆಯ್ಕೆಯಾಗಿದ್ದಾರೆ.

ಇವರಿಗೆ ಸೆ. 5 ರಂದು ಪಟ್ಟಣದ ವೇದವ್ಯಾಸ ಸಭಾಭವನದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಬಿಇಒ ಎನ್.ಆರ್.ಹೆಗಡೆ ತಿಳಿಸಿದ್ದಾರೆ.