ಬೆಳಗಾವಿಯ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು.!

ಬೆಳಗಾವಿ: ನೇಗಿನಹಾಳ ಗ್ರಾಮದ ಶ್ರೀಗುರು ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಶ್ರೀಮಠದ ಆವರಣದಲ್ಲಿರುವ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೈಲಹೊಂಗಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಬಳಿಕ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಸದ್ಯ ಆತ್ಮಹತ್ಯೆ ಮಾಡಿಕೊಂಡ ಬಸವಸಿದ್ಧಲಿಂಗ ಸ್ವಾಮೀಜಿ ಮಠದ ಹೆಸರು ಉಲ್ಲೇಖ ಮಾಡಿದ್ದರು. ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.