ಅನಾರೋಗ್ಯ ಹಾಗೂ ಪ್ರೇಮ ವೈಫಲ್ಯದಿಂದ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು.!

ಸಿದ್ದಾಪುರ: ಅನಾರೋಗ್ಯ ಹಾಗೂ ಲವ್ ಫೆಲ್ಯುವರ್ ಆಗಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದಾಪುರ ತಾಲೂಕಿನ ಹಲಸಗಾರಿನಲ್ಲಿ ನಡೆದಿದೆ.
ಕೋಲಸಿರ್ಸಿ ಸರ್ಕಾರಿ ಪಿ.ಯು ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಜಯಸೂರ್ಯ ಮಂಜುನಾಥ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕಳೆದ ಕೆಲ ದಿನಗಳಿಂದ ಈತನಿಗೆ ವಿಪರೀತ ತಲೆ ನೋವು ಕಾಣಿಸಿಕೊಂಡು ಶಿರಸಿಯ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಈತ ಪ್ರೇಮ ವೈಫಲ್ಯದಿಂದ ಮನನೊಂದು ಮನೆಯ ಸ್ಲ್ಯಾಬಿನ ಕಬ್ಬಿಣದ ರಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ಯುತ್ತಮ ಕ್ರೀಡಾಪಟುವಾಗಿದ್ದ ಜಯಸೂರ್ಯನ ಅಕಾಲಿಕ ಸಾವಿಗೆ ಸ್ನೇಹಿತರು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಂಬನಿ ಮಿಡಿದಿದ್ದಾರೆ. ಜಯಸೂರ್ಯ ನಿಧನದ ಹಿನ್ನೆಲೆಯಲ್ಲಿ ಸೋಮವಾರ ಕೋಲಸಿರ್ಸಿ ಪಿಯು ಕಾಲೇಜಿಗೆ ರಜೆ ನೀಡಲಾಗಿದೆ.