ಮರಾಠಿಕೊಪ್ಪ ಮಹಾಗಣಪತಿಗೆ ಉಪೇಂದ್ರ ಪೈ ಸೇವಾ ಟ್ರಸ್ಟ್ ನಿಂದ ಚಿನ್ನ ಲೇಪಿತ ಬೆಳ್ಳಿಯ ಕಿರೀಟ ಸಮರ್ಪಣೆ

ಶಿರಸಿ: ಮರಾಠಿಕೊಪ್ಪ ಮಹಾಗಣಪತಿಗೆ ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಚಿನ್ನ ಲೇಪಿತ ಬೆಳ್ಳಿಯ ಕಿರೀಟವನ್ನು ದಾನ ನೀಡಿದರು. ಮರಾಠಿಕೊಪ್ಪ ಗಜಾನನೋತ್ಸವ ಸಮಿತಿಯ ವತಿಯಿಂದ ಉಪೇಂದ್ರ ಪೈ ಅವರಿಗೆ ಫಲ – ತಾಂಬೂಲ, ದೇವರ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ತಮ್ಮ ಸೇವೆ ಹೀಗೇ ಮುಂದುವರಿಯಲಿ ಎಂದು ಸಮಿತಿಯವರು ಶುಭಕೋರಿದರು. ಈ ಸಂಧರ್ಭದಲ್ಲಿ ಈ ವರ್ಷದ ಸಮಿತಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಆ ಭಾಗದ ಪ್ರಮುಖ ಹಿರಿಯರು ಉಪಸ್ಥಿತರಿದ್ದರು