ವಲಯ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ಆನಂದ ಆಶ್ರಮ ಶಾಲಾ ವಿದ್ಯಾರ್ಥಿಗಳು

ಭಟ್ಕಳ: ಆನಂದ ಆಶ್ರಮ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಬಾಲಕ ಮತ್ತು ಬಾಲಕಿಯರ ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಬಾಲಕರ ಖೋಖೋ ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಮಕ್ಕಳ ಈ ಸಾಧನೆಗೆ ಮುಖ್ಯ ಶಿಕ್ಸಕಿ ಸರಿತಾ ತೋರಸ್, ದೈಹಿಕ ಶಿಕ್ಷಕರಾದ ಲೀಲಾಧರ ದೇವಾಡಿಗ, ಚಂದ್ರಕಾಂತ ಅಂಬಿಗ, ಅಂತೋನಿ ಮಿರೆಂಡ ಹರ್ಷವ್ಯಕ್ತಪಡಿಸಿದ್ದಾರೆ.