ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಅದಿರು ತುಂಬಿದ ಲಾರಿ

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಬಿಸಗೋಡ ಕ್ರಾಸ್ ಬಳಿ ನಡೆದಿದೆ. ಅದಿರು ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ ಬಿಸಗೋಡ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕಿಳಿದು ಧರೆಗೆ ಗುದ್ದಿದೆ.

ಇದರಿಂದ ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಳೆದ 3-4 ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಪಕ್ಕದ ಮಣ್ಣು ರಾಡಿಯಾಗಿ, ವಾಹನಗಳು ರಸ್ತೆ ಬಿಟ್ಟು ಕೆಳಗಿಳಿದಾಗ ಜಾರಿ ಅಪಘಾತ ಉಂಟಾಗುತ್ತಿದೆ.