ಮಾತಿಗೆ ತಪ್ಪದ ರೂಪಾಲಿ ನಾಯ್ಕ್: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದ ಶಾಸಕಿ

ಬೆಂಗಳೂರು: ಅಂಕೋಲಾ-ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ ವಿಧಾನಸಭಾ ಅಧಿವೇಶನದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಧ್ವನಿ ಎತ್ತಿದ್ದು ನುಡಿದಂತೆ ನಡೆದಿದ್ದಾರೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಚುಕ್ಕೆ ಗುರುತಿನ ಪ್ರಶ್ನೆಯನ್ನು ಕೇಳಿದ್ದು, ವೈದ್ಯಕೀಯ ಶಿಕ್ಷಣ ಸಚಿವರು ಅನಾರೋಗ್ಯದ ಕಾರಣ ಅಧಿವೇಶನಕ್ಕೆ ಗೈರಾಗಿದ್ದರು. ಹೀಗಾಗಿ ಮುಂದಿನ ವಾರಕ್ಕೆ ಅವಕಾಶ ನೀಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದ್ದಾರೆ. ಆದರೂ ಶಾಸಕಿ ನಾಯ್ಕ್ ಸದನದಲ್ಲಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆಯ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಿ ನುಡಿದಂತೆ ನಡೆಯುವ ನಾಯಕಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.