ಬ್ರಿಟನ್ ರಾಣಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಬ್ರಿಟನ್ ರಾಣಿ 2 ನೇ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಂಡು ಸಂತಾಪ ಸೂಚಿಸಲಿದ್ದಾರೆ. ಇದರ ಹಿನ್ನೆಲೆ ರಾಷ್ಟ್ರಪತಿಗಳು ಸೆ. 17-19 ರ ವರೆಗೆ ಲಂಡನ್‌ಗೆ ತೆರಳಲಿದ್ದಾರೆ.

ಬ್ರಿಟನ್ ರಾಷ್ಟ್ರದ ಮಾಜಿ ಮುಖ್ಯಸ್ಥೆ ರಾಣಿ 2 ನೇ ಎಲಿಜಬೆತ್ ಸೆ. 8 ರಂದು ನಿಧನರಾದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪಾಧ್ಯಕ್ಷ ಜಗದೀಪ್ ಧನಖರ್ ಸೇರಿದಂತೆ ವಿವಿಧ ಗಣ್ಯರು ಎಲಿಜಬೆತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಎಲಿಜಬೆತ್ ನಿಧನಕ್ಕೆ ಸೆ. 11 ರಂದು ಭಾರತದಾದ್ಯಂತ ಶೋಕಾಚರಣೆ ಆಚರಿಸಲಾಗಿತ್ತು. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸೆ. 12 ರಂದು ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ಗೆ ಭೇಟಿ ನೀಡಿ ರಾಣಿಯ ಅಗಲಿಕೆಗೆ ದೇಶದ ವತಿಯಿಂದ ಸಂತಾಪ ಸೂಚಿಸಿದ್ದರು.