ತಿರುಪತಿ ತಿರುಮಲನ ಹುಂಡಿಗೆ ಮುಕೇಶ್‌ ಅಂಬಾನಿ ಕಾಣಿಕೆ ಹಾಕಿದ್ದೆಷ್ಟು ಗೊತ್ತಾ.?!

ತಿರುಪತಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಕೇಶ್‌ ಅಂಬಾನಿ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ 1.5 ಕೋಟಿ ರೂ. ಕಾಣಿಕೆ ನೀಡಿದ್ದಾರೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ.

ತಿರುಪತಿ ವೆಂಕಟೇಶ್ವರನ ಭಕ್ತರಾಗಿರುವ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಜೊತೆ ಶುಕ್ರವಾರ ತಿರುಪತಿಗೆ ಭೇಟಿ ನೀಡಿದ್ದಾರೆ. ಪೂಜೆಯ ನಂತರ ಅಂಬಾನಿ ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ. ವೆಂಕಟ ಧರ್ಮ ರೆಡ್ಡಿ ಅವರಿಗೆ 1.5 ಕೋಟಿ ರೂ. ಮೌಲ್ಯದ ಚೆಕ್‌ ನೀಡಿದ್ದಾರೆ.

ಅಂಬಾನಿ, ರಾಧಿಕಾ ಮರ್ಚೆಂಟ್‌ ಹಾಗೂ ಮತ್ತಿತರು ಪವಿತ್ರ ಸ್ನಾನ ಸೇರಿದಂತೆ ಮತ್ತಿತರ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡಿದ್ದರು. ಅಂಬಾನಿ ಅವರು ದೇವಸ್ಥಾನದ ಆನೆಗಳಿಗೆ ಆಹಾರ ನೀಡಿ ತೆರಳಿದರು ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.