ಸರ್ಕಾರಿ ಸಂಸ್ಥೆಗಳಿಂದಲೇ ಅಕ್ರಮ ಒತ್ತುವರಿಯಾಗಿದೆ – ತುಷಾರ್ ಗಿರಿನಾಥ್ ಹೇಳಿಕೆ

ಬೆಂಗಳೂರು: ಸರ್ಕಾರಿ ಸಂಸ್ಥೆಗಳಿಂದಲೇ ಅಕ್ರಮ ಒತ್ತುವರಿಯಾಗಿದೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ 208 ಕೆರೆಗಳಿದ್ದು, ಇದರಲ್ಲಿ 201 ಕೆರೆಗಳು ಪಾಲಿಕೆಗೆ ಸೇರಿದ್ದಾಗಿದೆ. ಬೇರೆ ಬೇರೆ ಸಮಿತಿಯ ವರದಿಯಂತೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ನಗರದಲ್ಲಿ ಅತಿ ಹೆಚ್ಚು ಒತ್ತುವರಿ ಮಾಡಿರೋದು‌ ಬಿಡಿಎ ಅಂತ ಗೊತ್ತಾಗಿದೆ. ಬಿಡಿಎ ಒತ್ತುವರಿ ಮಾಡಿ ಅಧಿಕೃತ ಹಾಗೂ ಅನಧಿಕೃತವಾಗಿ ಲೇಔಟ್ ಗಳನ್ನು ನಿರ್ಮಾಣ ಮಾಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ಕೇಳಿ ಬಿಡಿಎಗೆ ನೋಟೀಸ್ ಕೊಡಲಾಗಿದ್ದು, ಈ ಕುರಿತು ಮಾಹಿತಿ ಕೊಟ್ಟಿದ್ದಾರೆ. ಅಲ್ಲದೇ ಕೆಲವು ಸರ್ಕಾರಿ ಸಂಸ್ಥೆಗಳಿಂದಲೂ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗಿದೆ. ಈ ಬಗ್ಗೆ ಎಲ್ಲಾ ಇಲಾಖೆಗಳ ಜೊತೆ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.