ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಕಾರವಾರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ನೇತೃತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು. ಯುವಮೋರ್ಚಾ ಸದಸ್ಯರು, ನರೇಂದ್ರ ಮೋದಿ ರವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿರಿಯರು ರಕ್ತದಾನ ಮಾಡಿದರು.

ಕಾರ್ಯಕ್ರಮವನ್ನು ಕಾರವಾರ-ಅಂಕೋಲಾ ವಿಧಾನಸಭಾ ಶಾಸಕಿ ರೂಪಾಲಿ ಎಸ್. ನಾಯಕ್ ಉದ್ಘಾಟಿಸಿ ಯುವಮೋರ್ಚಾ ತಂಡದ ಕಾರ್ಯವನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ ಕಾರವಾರದ ಕ್ರಿಮ್ಸ್ ನಿರ್ದೇಶಕರಾದ ಡಾ. ನಾಗರಾಜ ನಾಯಕ್ ಮಾತನಾಡಿ ರಕ್ತದಾನದ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷರಾದ ನಾಗೇಶ್ ಕುರುಡೆಕರ್, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ, ಸ್ಥಳೀಯ ನಗರಸಭೆ ಸದಸ್ಯರಾದ ರೋಶನಿ ಮಾಲಸೇಕರ, ಜಿಲ್ಲಾ ಕ್ಷಯರೋಗ ಅಧಿಕಾರಿ ಮಂಜುನಾಥ್ ನಾಯಕ್, ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ. ವೆಂಕಟೇಶ್, ಡಾ. ಮಂಜುನಾಥ್, ಡಾ. ಸಂದೀಪ ಯಾದವ, ಭಟ್, ನಗರ ಪೊಲೀಸ್ ಠಾಣೆಯ ಪಿಎಸ್ಐ ಸಂತೋಷ್ ಕುಮಾರ್, ಜಿಲ್ಲಾ ಬಿಜೆಪಿಯ ನಯನಾ ನೀಲಾವರ, ಸುಜಾತಾ ಬಾಂದೇಕರ್, ಯುವಮೋರ್ಚಾ ನಗರ ಅಧ್ಯಕ್ಷರಾದ ಶುಭಂ ಕಳಸ, ಗ್ರಾಮೀಣ ಅಧ್ಯಕ್ಷರಾದ ಪ್ರಣಯ ರಾಣೆ, ಒಬಿಸಿ ಮೋರ್ಚಾ ನಗರ ಅದ್ಯಕ್ಷರಾದ ಮುರುಳಿ ಗೋವೇಕರ್ ಸೇರಿದಂತೆ ಮಹಿಳಾ ಮೋರ್ಚಾ ಸದಸ್ಯರು, ಪಕ್ಷದ ಹಿರಿಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.