ಕಥುವಾದಲ್ಲಿ ಭಾರೀ ಅವಘಡ: ಟ್ರಕ್‌ಗೆ ಬೆಂಕಿ ತಗುಲಿ ಓರ್ವ ಸಜೀವ ದಹನ

ಜಮ್ಮುಕಾಶ್ಮೀರ: ರಾಜ್ಪಥ್ ಪ್ರದೇಶದ ಬಳಿಯ ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬೆಂಕಿ ಹೊತ್ತಿಕೊಂಡು ನಿರ್ವಾಹಕ ಸುಟ್ಟುಕರಕಲಾದ ಭೀಕರ ಘಟನೆ ನಡೆದಿದೆ. ಲಾರಿ ಚಾಲಕ ಲಾರಿಯಿಂದ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ತಲುಪಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಕಿಗೆ ನಿಖರವಾದ ಕಾರಣವನ್ನು ತಿಳಿಯಲು ಕಥುವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.