ಉತ್ತರಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಸ್ತು ಎಂದ ಸಿಎಂ.!

ಕಾರವಾರ: ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸರ್ಕಾರದಿಂದ ಕಳುಹಿಸಲಾಗಿದೆ. ಶಿಘ್ರವೇ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಗಲಿದೆ. ಈ ಕುರಿತು ಶೀಘ್ರದಲ್ಲೇ ಸರ್ಕಾರದಿಂದ ಅಧೀಕೃತ ಮಾಹಿತಿ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಅವರು ಉತ್ತರಕನ್ನಡದ ಸಂಸದರು, ಸಚಿವರ ಜೊತೆ ಸಭೆ ನಡೆಸಿದ ಬಳಿಕ ಈ ಕುರಿತು ಹೇಳಿಕೆ ನೀಡಿದ್ದಾರೆ. ಕಾರವಾರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಕುಮಟಾದಲ್ಲಿ ನಿರ್ಮಿಸಬೇಕೆಂದು ಸಲಹೆ ಬಂದಿದೆ. ಅಧಿವೇಶನ ಮುಗಿದ ಬಳಿಕ ಉತ್ತರಕನ್ನಡಕ್ಕೆ ಭೇಟಿ ನೀಡಲಿದ್ದೇನೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.