ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ.!

ಶಿರಸಿ: ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಸಾಗರ ಮೂಲದ 9 ನೇ ತರಗತಿ ವಿದ್ಯಾರ್ಥಿ ಆಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಮನೆಯಲ್ಲಿ ಪೋಷಕರು ಬಯ್ದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನಿಕರ ಕಾರಣ ತಿಳಿದುಬರಬೇಕಿದೆ. ಬಾವಿಯಿಂದ ಶವವನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳೀಯ ಜನರ ಸಹಾಯದಿಂದ ಮೇಲೆತ್ತಿದ್ದು, ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.