ಬೈಕ್ ಸವಾರನ ಮೇಲೆ ಹರಿದು ಹೋದ ಲಾರಿ: ಆಸ್ಪತ್ರೆಗೆ ಸಾಗಿಸುವ ಮಧ್ಯೆ ಬೈಕ್ ಸವಾರ ಸಾವು

ಭಟ್ಕಳ: ಮಣ್ಕುಳಿಯ ಪುಷ್ಪಾಂಜಲಿ ಕ್ರಾಸ್ ಸಮೀಪ ರಸ್ತೆ ಕ್ರಾಸ್ ಮಾಡಲು ನಿಂತಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಹೋಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಟ್ಟಳ್ಳಿಯ ಮರಂಬಳ್ಳಿ ನಿವಾಸಿ ಮಂಜುನಾಥ ಗೊಂಡ ಮೃತ ವ್ಯಕ್ತಿ.

ಈತ ಕೆಲಸಕ್ಕೆ ಹೋಗಲೆಂದು ಮಣ್ಕುಳಿಯ ಪುಷ್ಪಾಂಜಲಿ ಕ್ರಾಸ್ ಸಮೀಪ ರಸ್ತೆ ಕ್ರಾಸ್ ಮಾಡಲು ನಿಂತಿದ್ದ ವೇಳೆ  ಜಲ್ಲಿ ಸಾಗಿಸುತ್ತಿದ್ದ ಲಾರಿಯೊಂದು ಮುಂಭಾಗದಲ್ಲಿ ಬರುತ್ತಿದ್ದ ಕಾರಿಗೆ ಗುದ್ದಿ ರಸ್ತೆ ಕ್ರಾಸ್ ಮಾಡಲು ನಿಂತಿದ್ದ ಬೈಕ್ ಸವಾರನ ಮೇಲೆ ಹರಿದು ಹೋಗಿದೆ. ಅಪಘಾತ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆತನನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ. ಸದ್ಯ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.